Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:8 - ಪರಿಶುದ್ದ ಬೈಬಲ್‌

8 ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:8
9 ತಿಳಿವುಗಳ ಹೋಲಿಕೆ  

ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.


ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.


ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.


ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.


ಅಹಜ್ಯನು ಸಂದೇಶಕರನ್ನು, “ನಿಮ್ಮನ್ನು ಭೇಟಿಮಾಡಿ ಈ ಮಾತುಗಳನ್ನು ತಿಳಿಸಿದ ಮನುಷ್ಯನು ಹೇಗಿದ್ದನು?” ಎಂದು ಕೇಳಿದನು.


ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು