Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:11 - ಪರಿಶುದ್ದ ಬೈಬಲ್‌

11 ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನಂತರ ಅವನು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತವಿುತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:11
25 ತಿಳಿವುಗಳ ಹೋಲಿಕೆ  

ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.


ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.


ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.


ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು.


ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.


ಇಜ್ರೇಲ್, ಯೆಗ್ದೆಯಾಮ್, ಜನೋಹ,


ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.


ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.


“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.


ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.


ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬದಂತೆ ಮತ್ತು ಅಹೀಯನ ಮಗನಾದ ಬಾಷನ ಕುಟುಂಬದಂತೆ ಅಹಾಬನ ಕುಟುಂಬವನ್ನು ನಾಶಮಾಡುತ್ತೇನೆ.


ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು