Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:14 - ಪರಿಶುದ್ದ ಬೈಬಲ್‌

14 ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:14
11 ತಿಳಿವುಗಳ ಹೋಲಿಕೆ  

ಅತಲ್ಯಳು ಅಹಜ್ಯನ ತಾಯಿ. ತನ್ನ ಮಗನು ಸತ್ತನೆಂಬ ವರ್ತಮಾನ ಸಿಕ್ಕದ ಕೂಡಲೇ ಆಕೆ ಯೆಹೂದದಲ್ಲಿದ್ದ ಎಲ್ಲಾ ರಾಜಕುಮಾರರನ್ನು ಕೊಲ್ಲಿಸಿದಳು.


ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.” ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.


ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.


ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು.


ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.


ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.


ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು