Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:7 - ಪರಿಶುದ್ದ ಬೈಬಲ್‌

7 ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:7
9 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.


ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!


ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.” ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.


ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು