Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:11 - ಪರಿಶುದ್ದ ಬೈಬಲ್‌

11 ಈ ಕಾವಲುಗಾರರು ಆಲಯದ ಬಲಗಡೆಯ ಮೂಲೆಯಿಂದ ಎಡಗಡೆಯ ಮೂಲೆಯವರೆಗೆ ತಮ್ಮ ಕೈಗಳಲ್ಲಿ ಆಯುಧಗಳನ್ನು ಹಿಡಿದುಕೊಂಡು ನಿಂತರು. ರಾಜನು ಆಲಯದೊಳಕ್ಕೆ ಹೋದಾಗ ಅವರು ಅವನ ಸುತ್ತಲೂ, ಯಜ್ಞವೇದಿಕೆಯ ಮತ್ತು ಆಲಯದ ಸುತ್ತಲೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವದಕ್ಕೋಸ್ಕರ ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:11
9 ತಿಳಿವುಗಳ ಹೋಲಿಕೆ  

ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಯಜ್ಞವೇದಿಕೆಯ ಮುಂದೆ ಸೊಲೊಮೋನನು ಇಸ್ರೇಲರ ಜನರೆದುರಿಗೆ ನಿಂತುಕೊಂಡು ತನ್ನ ಕೈಗಳನ್ನೆತ್ತಿಕೊಂಡು ನಿಂತನು.


ಸೇನಾಧಿಪತಿಗಳಿಗೆ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಯಾಜಕನು ಕೊಟ್ಟನು. ರಾಜನಾದ ದಾವೀದನು ಯೆಹೋವನ ಆಲಯದಲ್ಲಿ ಈ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಇಟ್ಟಿದ್ದನು.


ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.


“ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.


ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು