Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:14 - ಪರಿಶುದ್ದ ಬೈಬಲ್‌

14 ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:14
17 ತಿಳಿವುಗಳ ಹೋಲಿಕೆ  

ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ಯೋರಾಮನು ಓಡಿಹೋಗಲು ತನ್ನ ಕುದುರೆಗಳನ್ನು ತಿರುಗಿಸಿಕೊಂಡನು. ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ಒಂದು ತಂತ್ರ!” ಎಂದು ಹೇಳಿದನು.


ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.


ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು.


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.


ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.


ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು