Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:15 - ಪರಿಶುದ್ದ ಬೈಬಲ್‌

15 ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆಲಸಗಾರರಿಗೆ ಸಂಬಳ ಕೊಡುವ ಮೊಕ್ತೇಸರರು ನಂಬಿಗಸ್ತರಾಗಿದ್ದದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:15
10 ತಿಳಿವುಗಳ ಹೋಲಿಕೆ  

ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.


ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!


ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.


ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು