Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:17 - ಪರಿಶುದ್ದ ಬೈಬಲ್‌

17 ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:17
20 ತಿಳಿವುಗಳ ಹೋಲಿಕೆ  

ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ.


ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.


ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು:


ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.


ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.


ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.


ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್‌ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.


ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.


ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.


ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.


ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.


ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು