Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:21 - ಪರಿಶುದ್ದ ಬೈಬಲ್‌

21 ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋಜಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:21
12 ತಿಳಿವುಗಳ ಹೋಲಿಕೆ  

ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.


ಯೆಹೂದದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋವಾಹಾಜನು ಹದಿನೇಳು ವರ್ಷ ಆಳಿದನು.


ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.


ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!


ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.


ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.


ಯಾಬೇಷನ ಮಗನಾದ ಶಲ್ಲೂಮನು ಜೆಕರ್ಯನ ವಿರುದ್ಧವಾಗಿ ಸಂಚುಗಳನ್ನು ಮಾಡಿದನು. ಶಲ್ಲೂಮನು ಜೆಕರ್ಯನನ್ನು ಜನರ ಮುಂದೆ ಕೊಂದುಹಾಕಿ ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು