Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:17 - ಪರಿಶುದ್ದ ಬೈಬಲ್‌

17 ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ ಎಂದನು. ಅವನು ತೆರೆದನು. ಅನಂತರ - ಬಾಣವನ್ನೆಸೆ ಎಂದು ಆಜ್ಞಾಪಿಸಿದನು. ಅವನು ಎಸೆಯಲು - ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:17
14 ತಿಳಿವುಗಳ ಹೋಲಿಕೆ  

ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.


ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.


ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.


ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.


ಅಫೇಕದ ಅರಸ ಲಷ್ಷಾರೋನಿನ ಅರಸ


ಆಗ ಎಲೀಷನು ಇಸ್ರೇಲಿನ ರಾಜನಿಗೆ, “ಬಿಲ್ಲಿನ ಮೇಲೆ ನಿನ್ನ ಕೈಯನ್ನು ಇಡು” ಎಂದು ಹೇಳಿದನು. ಯೋವಾಷನು ತನ್ನ ಕೈಯನ್ನು ಬಿಲ್ಲಿನ ಮೇಲಿಟ್ಟನು. ನಂತರ ಎಲೀಷನು ತನ್ನ ಕೈಗಳನ್ನು ರಾಜನ ಕೈಗಳ ಮೇಲಿಟ್ಟನು.


ಎಲೀಷನು, “ಬಾಣಗಳನ್ನು ತೆಗೆದುಕೋ” ಎಂದನು. ಯೋವಾಷನು ಬಾಣಗಳನ್ನು ತೆಗೆದುಕೊಂಡನು. ಆಗ ಎಲೀಷನು ಇಸ್ರೇಲಿನ ರಾಜನಿಗೆ, “ನೆಲದ ಮೇಲೆ ಹೊಡಿ” ಎಂದನು. ಯೋವಾಷನು ನೆಲವನ್ನು ಮೂರು ಸಲ ಹೊಡೆದನು. ನಂತರ ಅವನು ನಿಲ್ಲಿಸಿದನು.


ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು