Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:19 - ಪರಿಶುದ್ದ ಬೈಬಲ್‌

19 ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:19
13 ತಿಳಿವುಗಳ ಹೋಲಿಕೆ  

ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.


ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.


ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.


ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.


ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಆ ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು.


ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.


ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು.


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ಎಲೀಷನು, “ಬಾಣಗಳನ್ನು ತೆಗೆದುಕೋ” ಎಂದನು. ಯೋವಾಷನು ಬಾಣಗಳನ್ನು ತೆಗೆದುಕೊಂಡನು. ಆಗ ಎಲೀಷನು ಇಸ್ರೇಲಿನ ರಾಜನಿಗೆ, “ನೆಲದ ಮೇಲೆ ಹೊಡಿ” ಎಂದನು. ಯೋವಾಷನು ನೆಲವನ್ನು ಮೂರು ಸಲ ಹೊಡೆದನು. ನಂತರ ಅವನು ನಿಲ್ಲಿಸಿದನು.


ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು