Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:21 - ಪರಿಶುದ್ದ ಬೈಬಲ್‌

21 ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಂದು ದಿವಸ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವದಕ್ಕೆ ಹೋದಾಗ ಮೋವಾಬ್ಯರ ಗುಂಪು ಬರುತ್ತಿರುವದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿ ಹೋದರು. ಸತ್ತ ಮನುಷ್ಯನು ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ ಉಜ್ಜೀವಿಸಿ ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:21
11 ತಿಳಿವುಗಳ ಹೋಲಿಕೆ  

ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.


ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.


ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.


ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.


ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ಯೆಹೋವಾಹಾಜನು ಆಳುತ್ತಿದ್ದ ದಿನಗಳಲ್ಲೆಲ್ಲಾ ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿಗೆ ತೊಂದರೆ ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು