Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:5 - ಪರಿಶುದ್ದ ಬೈಬಲ್‌

5 ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.


ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು.


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.


ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.


ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು’” ಎಂದು ಹೇಳಿದ್ದಾನಲ್ಲವೆ ಅಂದರು.


ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.


“ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”


“ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು