Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:7 - ಪರಿಶುದ್ದ ಬೈಬಲ್‌

7 ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:7
17 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.


ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


“‘ನೀವು ನನ್ನ ಒಡೆಯನಾದ ಅರಸನೊಂದಿಗೆ ಯುದ್ಧಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಈ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ.


ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.


ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.


ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.


ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.


ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು.


ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.


“ಇಸ್ರೇಲಿನ ರಾಜರುಗಳು ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು