Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:10 - ಪರಿಶುದ್ದ ಬೈಬಲ್‌

10 ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:10
26 ತಿಳಿವುಗಳ ಹೋಲಿಕೆ  

ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢನಾದರೊ ಜಗಳಕ್ಕೇ ಆತುರ ಪಡುವನು.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ನಿನಗೆ ಕೇಡನ್ನು ಮಾಡಿಲ್ಲದಿರುವವನನ್ನು ನಿಷ್ಕಾರಣವಾಗಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಡ.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ.


ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ಪರ್ಶಿಯ, ಇಥಿಯೋಪ್ಯ ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ಧರಿಸಿಕೊಂಡಿರುವರು.


“ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.


ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ.


ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.


ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.


ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ಮೋಶೆಯು ಫರೋಹನಿಗೆ, “ಕಪ್ಪೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು.


ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.


ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.


ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು