Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:19 - ಪರಿಶುದ್ದ ಬೈಬಲ್‌

19 ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:19
17 ತಿಳಿವುಗಳ ಹೋಲಿಕೆ  

ಆಮೇಲೆ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಲಿಬ್ನವನ್ನು ಬಿಟ್ಟು ಲಾಕೀಷಿಗೆ ಹೋದರು. ಯೆಹೋಶುವನು ಮತ್ತು ಅವನ ಜನರು ಲಾಕೀಷಿಗೆ ಮುತ್ತಿಗೆಹಾಕಿ ಅದರ ಮೇಲೆ ಧಾಳಿಮಾಡಿದರು.


ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.


ಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.


ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.


ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.


ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.


ಯಾಬೇಷನ ಮಗನಾದ ಶಲ್ಲೂಮನು ಜೆಕರ್ಯನ ವಿರುದ್ಧವಾಗಿ ಸಂಚುಗಳನ್ನು ಮಾಡಿದನು. ಶಲ್ಲೂಮನು ಜೆಕರ್ಯನನ್ನು ಜನರ ಮುಂದೆ ಕೊಂದುಹಾಕಿ ಹೊಸ ರಾಜನಾದನು.


ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,


ಲಾಕೀಷ್, ಬೊಚ್ಕತ್, ಎಗ್ಲೋನ್,


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ.


ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು.


ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು