Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:25 - ಪರಿಶುದ್ದ ಬೈಬಲ್‌

25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:25
16 ತಿಳಿವುಗಳ ಹೋಲಿಕೆ  

ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.


ಆಮಿತ್ತೈಯ ಮಗನಾದ ಯೋನನಿಗೆ ಯೆಹೋವನು ಹೇಳಿದ್ದೇನೆಂದರೆ,


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಅಲ್ಲಿಂದ ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರ್ ಮತ್ತು ಎತ್‌ಕಾಚೀನಿನ ಮೇಲಿಂದ ರಿಮ್ಮೋನಿಗೆ ತಲುಪಿ ಅಲ್ಲಿಂದ ತಿರುಗಿಕೊಂಡು “ನೇಯಕ್ಕೆ” ಹೋಗುತ್ತದೆ.


ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.


ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.


“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.


ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.


ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.


ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.


ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು