Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:28 - ಪರಿಶುದ್ದ ಬೈಬಲ್‌

28 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:28
10 ತಿಳಿವುಗಳ ಹೋಲಿಕೆ  

ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು.


ಯೋತಾಮ ಮತ್ತು ಯಾರೊಬ್ಬಾಮನ ಕಾಲದಲ್ಲಿ ಇವರ ಹೆಸರುಗಳನ್ನೆಲ್ಲಾ ಗಾದ್ಯರ ಸಂತಾನ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಯೋತಾಮನು ಯೆಹೂದದ ಅರಸನಾಗಿದ್ದನು ಮತ್ತು ಯಾರೊಬ್ಬಾಮನು ಇಸ್ರೇಲರ ಅರಸನಾಗಿದ್ದನು.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.


“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು