Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:14 - ಪರಿಶುದ್ದ ಬೈಬಲ್‌

14 ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:14
12 ತಿಳಿವುಗಳ ಹೋಲಿಕೆ  

ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.


ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.


“ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದ್ದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು.


ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.


ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.


ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.


ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು.


ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.


ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ” ಎಂದು ಹೇಳಿದರು.


ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು