Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:15 - ಪರಿಶುದ್ದ ಬೈಬಲ್‌

15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:15
25 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


“ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.


ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.


ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು.


ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು.


ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.


ಮುಂಜಾನೆ, ಯಜ್ಞಗಳನ್ನು ಅರ್ಪಿಸುವ ಕಾಲದಲ್ಲಿ ಎದೋಮಿನ ಕಡೆಯಿಂದ ನೀರು ಹರಿಯಲಾರಂಭಿಸಿತು ಮತ್ತು ಕಣಿವೆಯು ತುಂಬಿಕೊಂಡಿತು.


ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.


ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.


ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು.


ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು