Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:3 - ಪರಿಶುದ್ದ ಬೈಬಲ್‌

3 ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಹೇಸಿಗೆ ಕೆಲಸಗಳನ್ನು ಅನುಸರಿಸಿ ತನ್ನ ಮಗನನ್ನು ಆಹುತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದನು. ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:3
32 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಮನಸ್ಸೆಯು ಮಾಡಿದನು.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ.


ನೀನು ನನ್ನ ಗಂಡುಮಕ್ಕಳನ್ನು ಸಂಹರಿಸಿ ಬೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.


ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.


ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.


ಆದರೆ ಯೆಹೂದದ ಜನರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಿರಲಿಲ್ಲ. ಯೆಹೂದದ ಜನರು ಇಸ್ರೇಲಿನ ಜನರಂತೆಯೇ ಜೀವಿಸುತ್ತಿದ್ದರು.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.


ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.


ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು