Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:9 - ಪರಿಶುದ್ದ ಬೈಬಲ್‌

9 ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:9
12 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”


ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.


ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.


ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.


ಆಹಾಜನು ದೇವರ ಆಲಯದಿಂದಲೂ ರಾಜ ನಿವಾಸದಿಂದಲೂ ಮತ್ತು ರಾಜಕುಮಾರರ ಮನೆಯಿಂದಲೂ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದು ಅಶ್ಶೂರದ ಅರಸನಿಗೆ ಕೊಟ್ಟರೂ ಅಶ್ಶೂರದ ಅರಸನು ಆಹಾಜನಿಗೆ ಸಹಾಯ ಮಾಡದೆ ಹೋದನು.


ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.


ಅಶ್ಶೂರದ ಅರಸರು ಆ ಎಲ್ಲಾ ಜನಾಂಗಗಳನ್ನು ನಾಶಮಾಡಿದ್ದು ನಿಜ.


ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.


“ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು