Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:10 - ಪರಿಶುದ್ದ ಬೈಬಲ್‌

10 ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲುಕಂಬ, ಅಶೇರವಿಗ್ರಹ ಸ್ತಂಭ ಇವುಗಳನ್ನು ನಿಲ್ಲಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:10
14 ತಿಳಿವುಗಳ ಹೋಲಿಕೆ  

ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.


ನಾನು ನಿನ್ನ ಅಶೇರ ಸ್ತಂಭಗಳನ್ನೂ ಸುಳ್ಳು ದೇವರುಗಳನ್ನೂ ನಾಶಮಾಡುವೆನು.


ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.


ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.


ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.


“ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!


ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.


ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.


ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.


ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು