Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:19 - ಪರಿಶುದ್ದ ಬೈಬಲ್‌

19 ಆದರೆ ಯೆಹೂದದ ಜನರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಿರಲಿಲ್ಲ. ಯೆಹೂದದ ಜನರು ಇಸ್ರೇಲಿನ ಜನರಂತೆಯೇ ಜೀವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದದವರು ಸಹ ತಮ್ಮ ಯೆಹೋವ ದೇವರ ಆಜ್ಞೆಗಳನ್ನು ಕೈಕೊಳ್ಳದೆ, ಇಸ್ರಾಯೇಲರ ಪದ್ಧತಿಗಳಲ್ಲಿಯೇ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:19
17 ತಿಳಿವುಗಳ ಹೋಲಿಕೆ  

ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.


ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.


ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಜ್ಯನು ಮಾಡಿದನು. ಅಹಜ್ಯನು ಅಹಾಬನ ಕುಟುಂಬದ ಜನರಂತೆ ಜೀವಿಸಿದ್ದನು. ಅಹಜ್ಯನು ಅಹಾಬನ ಅಳಿಯನಾದ್ದರಿಂದ ಅವನು ಹೀಗೆ ಜೀವಿಸಿದನು.


ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.


ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.


ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.


ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.


ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು