Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:20 - ಪರಿಶುದ್ದ ಬೈಬಲ್‌

20 ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:20
42 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.


ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.


ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಆತನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.


ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.


ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು.


ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.


ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು