20 ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.
20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.
ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಆತನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು.
ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.
ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.
ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.
ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.
ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.
ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.
ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.
ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.
ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.