Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಇಸ್ರೇಲರು ಯಾರೊಬ್ಬಾಮನು ಮಾಡಿದ ಪಾಪಗಳನ್ನೆಲ್ಲ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಯಾರೊಬ್ಬಾಮನ ದುರ್ಮಾರ್ಗದಲ್ಲೇ ನಡೆಯುವುದನ್ನು ಬಿಡಲಿಲ್ಲವಾದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು. ಅವರು ಯಾರೊಬ್ಬಾಮನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರು ಯಾರೊಬ್ಬಾಮನು ಮಾಡಿದ ಸಮಸ್ತ ಪಾಪಗಳಲ್ಲಿ ನಡೆದರು. ಅವುಗಳನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:22
10 ತಿಳಿವುಗಳ ಹೋಲಿಕೆ  

ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಕೃತ್ಯಗಳನ್ನು ಅವನು ನಿಲ್ಲಿಸಲಿಲ್ಲ.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಇಸ್ರೇಲಿನ ರಾಜನಾದ ಯೋವಾಷನು ಮಾಡಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಮತ್ತೆ ಮಾಡುವುದನ್ನು ಅವನು ನಿಲ್ಲಿಸಲಿಲ್ಲ.


ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು.


ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.


ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.


ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು