Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:27 - ಪರಿಶುದ್ದ ಬೈಬಲ್‌

27 ಆದ್ದರಿಂದ ಅಶ್ಶೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ. ಆ ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಆ ಯಾಜಕನ ಆ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅವನು, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅವರಿಗೆ ಕಲಿಸಲಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಅವನು ಅವರಿಗೆ - ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:27
7 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.


ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”


ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)


ಮೀಕನು ತನ್ನೊಳಗೆ, “ಯೆಹೋವನು ನನಗೆ ಕೃಪೆ ತೋರುವನು. ಏಕೆಂದರೆ ನನ್ನ ಮನೆಯಲ್ಲಿ ಲೇವಿಕುಲದ ಒಬ್ಬನು ಯಾಜಕನಾಗಿದ್ದಾನೆ” ಎಂದುಕೊಂಡನು.


ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು.


ಹೀಗೆ ಅಶ್ಶೂರದವರು ಸಮಾರ್ಯದಿಂದ ಕರೆದೊಯ್ದಿದ್ದ ಯಾಜಕರಲ್ಲೊಬ್ಬನು ಬೇತೇಲಿನಲ್ಲಿ ವಾಸಿಸಲು ಬಂದನು. ಈ ಯಾಜಕನು ಜನರಿಗೆ, ಯೆಹೋವ ಭಕ್ತಿಯನ್ನು ಬೋಧಿಸಿದನು.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು