Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:31 - ಪರಿಶುದ್ದ ಬೈಬಲ್‌

31 ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿವಿುನವರು ತಮ್ಮ ಕುಲದೇವತೆಗಳಾಗಿರುವ ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬವುಗಳಿಗೋಸ್ಕರ ತಮ್ಮ ಮಕ್ಕಳನ್ನು ಆಹುತಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:31
8 ತಿಳಿವುಗಳ ಹೋಲಿಕೆ  

ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.


ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು