Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:14 - ಪರಿಶುದ್ದ ಬೈಬಲ್‌

14 ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಜುದೇಯದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ಅಪರಾಧಿ; ತಾವು ನನ್ನನ್ನು ಬಿಟ್ಟುಹೋಗಬೇಕು; ತಾವು ನನಗೆ ವಿಧಿಸುವಷ್ಟನ್ನೂ ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಸ್ಸೀರಿಯದ ಅರಸನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ಅಪರಾಧಿ; ನೀನು ನನ್ನನ್ನು ಬಿಟ್ಟುಹೋಗು, ನೀನು ನನಗೆ ವಿಧಿಸುವಷ್ಟನ್ನು ಕೊಡುತ್ತೇನೆ ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:14
9 ತಿಳಿವುಗಳ ಹೋಲಿಕೆ  

ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.


ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.


ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”


ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.


ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.


ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು