Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:24 - ಪರಿಶುದ್ದ ಬೈಬಲ್‌

24 ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:24
21 ತಿಳಿವುಗಳ ಹೋಲಿಕೆ  

ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.


ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ರಂಧ್ರಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.


ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.


ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


‘ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.


‘ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು”’ ಎಂದು ಹೇಳಿದನು.


ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ಆಗ ಈಜಿಪ್ಟಿನಲ್ಲಿ ವಾಸಮಾಡುವವರೆಲ್ಲರೂ ನಾನು ಒಡೆಯನಾದ ಯೆಹೋವನು ಎಂದು ತಿಳಿದುಕೊಳ್ಳುವರು. “‘ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ? ಯಾಕೆಂದರೆ ಇಸ್ರೇಲಿನ ಜನರು ಈಜಿಪ್ಟಿನ ಸಹಾಯದ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಪೊಳ್ಳು ಬೆತ್ತದಂತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು