Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:25 - ಪರಿಶುದ್ದ ಬೈಬಲ್‌

25 ‘ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು”’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:25
10 ತಿಳಿವುಗಳ ಹೋಲಿಕೆ  

ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.


ನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು.


ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು