Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:4 - ಪರಿಶುದ್ದ ಬೈಬಲ್‌

4 ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:4
30 ತಿಳಿವುಗಳ ಹೋಲಿಕೆ  

ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.


ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.


ಯೆಹೋಷಾಫಾಟನು ಒಳ್ಳೆಯವನಾಗಿದ್ದನು. ಅವನು ತನ್ನ ತಂದೆಯ ಮಾರ್ಗವನ್ನು ಅನುಸರಿಸಿದನು. ಯೆಹೋವನು ಅಪೇಕ್ಷಿಸಿದವುಗಳಿಗೆಲ್ಲ ಅವನು ವಿಧೇಯನಾಗಿದ್ದನು. ಆದರೆ ಯೆಹೋಷಾಫಾಟನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾ ಧೂಪಹಾಕುತ್ತಾ ಇದ್ದರು.


ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರಸ್ತಂಭವು ಕಡಿದು ಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ್ದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಎರಡನೆಯ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು.


ಅದೇ ರಾತ್ರಿ ಯೆಹೋವನು ಗಿದ್ಯೋನನೊಂದಿಗೆ ಮಾತನಾಡಿ, “ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನು ಮತ್ತು ಏಳು ವರ್ಷದ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಯು ಸುಳ್ಳುದೇವರಾದ ಬಾಳನಿಗೆ ಕಟ್ಟಿರುವ ಯಜ್ಞವೇದಿಕೆಯನ್ನು ಕೆಡವಿಬಿಡು; ಅದರ ಬಳಿಯಲ್ಲಿರುವ ಅಶೇರ ಎಂಬ ವಿಗ್ರಹಸ್ತಂಭವನ್ನು ಕಡಿದುಹಾಕು.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾಮನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.


ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪ ಹಾಕುತ್ತಿದ್ದರು.


ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.


ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.


ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.


“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.


ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.


ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.


ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು