Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:22 - ಪರಿಶುದ್ದ ಬೈಬಲ್‌

22 ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:22
22 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.


ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.


ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.


ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ, ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ.


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.


ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.


ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.


ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು