Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:3 - ಪರಿಶುದ್ದ ಬೈಬಲ್‌

3 ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:3
13 ತಿಳಿವುಗಳ ಹೋಲಿಕೆ  

ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.


ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.


‘ನಿಮ್ಮನ್ನು ಮೂರ್ಖರನ್ನಾಗಿಸಲು ಹಿಜ್ಕೀಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ.


ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು