Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:1 - ಪರಿಶುದ್ದ ಬೈಬಲ್‌

1 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು ಎಲೀಷನೊಡನೆ ಗಿಲ್ಗಾಲಿನಿಂದ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಎಲೀಯನನ್ನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:1
15 ತಿಳಿವುಗಳ ಹೋಲಿಕೆ  

ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.


ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.


ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.


ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.


ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.


ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:


ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.


ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು