Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:12 - ಪರಿಶುದ್ದ ಬೈಬಲ್‌

12 ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:12
28 ತಿಳಿವುಗಳ ಹೋಲಿಕೆ  

ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.


ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.


ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.”


ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.


ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.


ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.


ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’


ಹಿಜ್ಕೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ:


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.


ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.


ನಿರಪರಾಧಿಗಳನ್ನು ರಕ್ಷಿಸುವನು. ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.”


ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.


ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಜೋರ್ಡನ್ ನದಿ ತೀರಕ್ಕೆ ಬಂದನು. ಆ ಕಂಬಳಿಯಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು.


ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.


ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು.


ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.


ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಔನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು. ಮೀಕನು ಹೇಳಿದಂತೆ ಆ ಲೇವಿಯು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು