Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:15 - ಪರಿಶುದ್ದ ಬೈಬಲ್‌

15 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:15
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ಆಗ ಶೂನೇಮಿನ ಆ ಸ್ತ್ರೀಯು ಕೊಠಡಿಯೊಳಕ್ಕೆ ಹೋಗಿ, ಎಲೀಷನ ಪಾದಗಳಿಗೆ ಬಾಗಿ ನಮಸ್ಕರಿಸಿದಳು. ನಂತರ ಅವಳು ತನ್ನ ಮಗನನ್ನು ಎತ್ತಿಕೊಂಡು ಹೊರಗೆ ಹೋದಳು.


ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.


ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.


ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.


“ಇಸ್ರೇಲರ ಇಡೀ ಸಮುದಾಯವು ವಿಧೇಯರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು.


ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.


ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.


ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.


ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು