Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:8 - ಪರಿಶುದ್ದ ಬೈಬಲ್‌

8 ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:8
12 ತಿಳಿವುಗಳ ಹೋಲಿಕೆ  

ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು