Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:1 - ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:1
15 ತಿಳಿವುಗಳ ಹೋಲಿಕೆ  

ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.


ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.


ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.


ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನಲ್ಲಿ ಪ್ರಾರ್ಥಿಸುತ್ತಾ,


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು.


ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು