Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:19 - ಪರಿಶುದ್ದ ಬೈಬಲ್‌

19 ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:19
15 ತಿಳಿವುಗಳ ಹೋಲಿಕೆ  

ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರ ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರುಸಲೇಮಿನಲ್ಲಿ ವಾಸವಾಗಿದ್ದನು.


ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.


‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು