Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:3 - ಪರಿಶುದ್ದ ಬೈಬಲ್‌

3 “ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:3
47 ತಿಳಿವುಗಳ ಹೋಲಿಕೆ  

ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.


ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.


ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”


ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.


ನಿನ್ನ ವಾಗ್ದಾನವನ್ನು ನನಗೋಸ್ಕರ ನೆನಪು ಮಾಡಿಕೋ. ಆ ವಾಗ್ದಾನವೇ ನನ್ನ ನಿರೀಕ್ಷೆಯಾಗಿದೆ.


ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.


ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ. ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಅಭಿಷೇಕಿಸಿದ ರಾಜನನ್ನು ಅವರು ಅವಮಾನ ಮಾಡಿದರು!


ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.


ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.


ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.


ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.


ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.


ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನಲ್ಲಿ ಪ್ರಾರ್ಥಿಸುತ್ತಾ,


ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ಬಿಡುವುದಕ್ಕೆ ಮುಂಚೆಯೇ, ಯೆಹೋವನ ವಾಕ್ಯವು ಅವನಿಗೆ ಬಂದಿತು. ಯೆಹೋವನು


ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.


ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.


“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.


ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.


ನನ್ನ ಕಣ್ಣೀರೇ ನನ್ನ ಪ್ರತಿನಿಧಿಯಾಗಿದೆ. ನನ್ನ ಕಣ್ಣು ದೇವರ ಉತ್ತರಕ್ಕಾಗಿ ಆಕಾಂಕ್ಷೆಯಿಂದ ಎದುರುನೋಡುತ್ತಿದೆ.


ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.


ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!


ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. ಆಗ ನೀನು ನನಗೆ ಉತ್ತರಿಸಿದೆ. ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು