Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:3 - ಪರಿಶುದ್ದ ಬೈಬಲ್‌

3 ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:3
23 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.


ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ.


ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು.


ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.


ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಜ್ಯನು ಮಾಡಿದನು. ಅಹಜ್ಯನು ಅಹಾಬನ ಕುಟುಂಬದ ಜನರಂತೆ ಜೀವಿಸಿದ್ದನು. ಅಹಜ್ಯನು ಅಹಾಬನ ಅಳಿಯನಾದ್ದರಿಂದ ಅವನು ಹೀಗೆ ಜೀವಿಸಿದನು.


ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.


ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


“ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪಮಾಡಿ


ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು.


“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು