Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:2 - ಪರಿಶುದ್ದ ಬೈಬಲ್‌

2 ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:2
18 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಸಮಾಧಿಯಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.


ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.


ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.


ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.


ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.


ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.


ಅವರು ಚಿಕ್ಲಗಿನ ಸ್ತ್ರೀಯರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಎಲ್ಲರನ್ನೂ ಬಂಧಿಗಳನ್ನಾಗಿ ಎಳೆದುಕೊಂಡು ಹೋಗಿದ್ದರು; ಅವರು ಯಾರನ್ನೂ ಕೊಂದಿರಲಿಲ್ಲ, ಆದರೆ ಎಲ್ಲರನ್ನೂ ಎಳೆದುಕೊಂಡು ಹೋಗಿದ್ದರು.


ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.


ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.


ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು