Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:24 - ಪರಿಶುದ್ದ ಬೈಬಲ್‌

24 ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:24
21 ತಿಳಿವುಗಳ ಹೋಲಿಕೆ  

“ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಆಮೋನನು ತನ್ನ ತಂದೆಯಂತೆ ಜೀವಿಸಿದ್ದನು. ತನ್ನ ತಂದೆಯು ಪೂಜಿಸಿದ ವಿಗ್ರಹಗಳನ್ನು ಆಮೋನನು ಪೂಜಿಸಿದನು.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.


ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.


ಯೋಷೀಯನು ರಾಜನಾಗಿದ್ದ ಹದಿನೆಂಟನೆ ವರ್ಷದಲ್ಲಿ ಅವರು ಯೆಹೋವನಿಗಾಗಿ ಈ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು