Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:27 - ಪರಿಶುದ್ದ ಬೈಬಲ್‌

27 ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:27
26 ತಿಳಿವುಗಳ ಹೋಲಿಕೆ  

ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.


“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.


ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ.


ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.


“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


“ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.


ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು