Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:3 - ಪರಿಶುದ್ದ ಬೈಬಲ್‌

3 ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:3
36 ತಿಳಿವುಗಳ ಹೋಲಿಕೆ  

ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


“ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


“ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


“ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.


ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು.


ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ.


ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.


ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.


ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು