Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:5 - ಪರಿಶುದ್ದ ಬೈಬಲ್‌

5 ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಲ್ಲದೆ, ಜುದೇಯ ಪ್ರಾಂತ್ಯದ ಪಟ್ಟಣಗಳಲ್ಲೂ ಜೆರುಸಲೇಮಿನ ಸುತ್ತಣ ಪ್ರದೇಶದಲ್ಲೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳ್ ದೇವತೆಗೂ ಸೂರ್ಯ ಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಾರತಿಯೆತ್ತುವುದಕ್ಕಾಗಿ ಜುದೇಯದ ರಾಜರಿಂದ ನೇಮಿತರಾಗಿದ್ದ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯೆಹೂದ ಪ್ರಾಂತದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಸುತ್ತಣ ಪ್ರದೇಶದಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳನಿಗೂ ಸೂರ್ಯಚಂದ್ರನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಸುಡುವದಕ್ಕಾಗಿ ಯೆಹೂದರಾಜರಿಂದ ನೇವಿುಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ, ಯೆರೂಸಲೇಮಿನ ಸುತ್ತಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸರು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ, ಸೂರ್ಯನಿಗೂ, ಚಂದ್ರನಿಗೂ, ಗ್ರಹಗಳಿಗೂ, ಆಕಾಶದ ಸಮಸ್ತ ಸೈನ್ಯಕ್ಕೂ, ಧೂಪಸುಡುವವರನ್ನೂ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:5
10 ತಿಳಿವುಗಳ ಹೋಲಿಕೆ  

ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


ಮನಸ್ಸೆಯು ಪರಲೋಕದ ನಕ್ಷತ್ರಗಳಿಗಾಗಿ ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು.


ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು


ಯೋಬನೇ, ನೀನು ಸಮಯಕ್ಕೆ ಸರಿಯಾಗಿ ನಕ್ಷತ್ರರಾಶಿಗಳನ್ನು ಬರಮಾಡಬಲ್ಲೆಯಾ? ನೀನು ಬೇರ್ ನಕ್ಷತ್ರಗಳನ್ನು ಅದರ ಮರಿಗಳೊಂದಿಗೆ ನಡೆಸಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು