8-9 ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು.
ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.
ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.
ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.
ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.
ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.
ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.
ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.