Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:4 - ಪರಿಶುದ್ದ ಬೈಬಲ್‌

4 ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:4
20 ತಿಳಿವುಗಳ ಹೋಲಿಕೆ  

ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


“ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?


“ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳ ರಕ್ತವನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು.


ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.


“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋಯಾಕೀಮನು ಮಾಡಿದ ಇತರ ಕಾರ್ಯಗಳನ್ನು ಬರೆಯಲಾಗಿದೆ.


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.


“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.


ಆಕೆಯು ಸುರಿಸಿದ ರಕ್ತವು ಬರಿದಾದ ಬಂಡೆಯ ಮೇಲೆ ಮುಚ್ಚಲ್ಪಡದಂತೆ ನಾನೇ ಮಾಡಿದೆನು. ನಿರಪರಾಧಿಗಳನ್ನು ಆಕೆ ಕೊಂದದ್ದಕ್ಕೆ ಜನರು ಕೋಪಗೊಂಡು ಆಕೆಯನ್ನು ದಂಡಿಸಲೆಂದು ನಾನು ಹೀಗೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು